Menu

RCB Victory tragedy: ಬಂಧಿತ ಆರ್‌ಸಿಬಿ ಸಿಬ್ಬಂದಿಗೆ ಹೈಕೋರ್ಟ್‌ ಜಾಮೀನು

rcb marketing head sosale

ಆರ್‌ಸಿಬಿ ವಿಜಯೋತ್ಸವ ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್‌ ಕುಮಾರ್, ಶಮಂತ್ ಮಾವಿನಕೆರೆಗೆ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಆರೋಪಿಗಳು ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಷರತ್ತು ವಿಧಿಸಿ, ಮಧ್ಯಂತರ ಜಾಮೀನು ನೀಡಿದೆ.

ಪ್ರಕರಣದಲ್ಲಿ ತಮ್ಮನ್ನು ಬಂಧಿಸಿದ ಪೊಲೀಸರ ಕ್ರಮ ಕಾನೂನು ಬಾಹಿರವಾಗಿದ್ದು, ಬಿಡುಗಡೆ ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಈ ನಾಲ್ವರು ಆರ್​ಸಿಬಿ ಸಿಬ್ಬಂದಿ ಮನವಿ ಸಲ್ಲಿಸಿದ್ದರು. ಮನವಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಸ್​.ಆರ್​ ಕೃಷ್ಣ ಕುಮಾರ್ ಅವರ ಪೀಠ​ ಮಧ್ಯಂತರ ಜಾಮೀನು ನೀಡಿದೆ.

ಸಿಸಿಬಿ ನಿಖಿಲ್ ಸೋಸಲೆಯನ್ನು ಬಂಧಿಸಿದೆ, ಸಿಐಡಿಗೆ ತನಿಖೆ ಹಸ್ತಾಂತರವಾದಾಗ ಸಿಸಿಬಿಗೆ ಬಂಧಿಸುವ ಅಧಿಕಾರವಿರಲಿಲ್ಲ. ಕಾರಣಗಳನ್ನು ತಿಳಿಸದೆ ಕಾನೂನು ಬಾಹಿರವಾಗಿ ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದಾರೆ ಎಂದು ವಕೀಲ ಸಂದೇಶ್ ಚೌಟ ಪೀಠಕ್ಕೆ ತಿಳಿಸಿದರು. ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದಿಸಿ, ಬೆಂಗಳೂರು ತೊರೆಯುವಾಗ ಅವರನ್ನು ಬಂಧಿಸಲಾಗಿದೆ. 11 ಅಮಾಯಕರ ಸಾವಿನ ಬಗ್ಗೆ ಅವರು ವಾದಿಸುತ್ತಿಲ್ಲ ಎಂದರು.

Related Posts

Leave a Reply

Your email address will not be published. Required fields are marked *