ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಮಧ್ಯಾಹ್ನ 2:30ಕ್ಕೆ ವಿಚಾರಣೆ ನಡೆಯಲಿದೆ. ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು.
ಪೊಲೀಸ್ ಇಲಾಖೆಯ ಸಲಹೆಯನ್ನು ಪರಿಗಣಿಸದೆ ಸರ್ಕಾರವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸದೆ ಬೇಜವಾಬ್ದಾರಿಯಿಂದ ನಡೆದುಕೊಂಡು ಆರ್ಸಿಬಿ ವಿಜಯೋತ್ಸವ ಆಚರಿಸಲು ಮುಂದಾಗಿ ಹನ್ನೊಂದು ಮಂದಿ ಪ್ರಾಣ ಕಳೆದುಕೊಳ್ಳಲು ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿದೆ.