Menu

ಮರು ಜಾತಿ ಗಣತಿ: ಶಾಸಕ ದಿನೇಶ್ ಗೂಳಿಗೌಡ ಸ್ವಾಗತ

ಮರು ಜಾತಿ ಗಣತಿ ಮಾಡಲು ಮುಂದಾಗಿರುವ ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಮರು ಜಾತಿ ಗಣತಿ ನಿರ್ಣಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗ ಈ ಹಿಂದೆ ನಡೆಸಿದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ)ಯನ್ನು ಸರ್ಕಾರ ತಾತ್ವಿಕವಾಗಿ ಒಪ್ಪುತ್ತದೆ ಎಂದು ಹೇಳಿತ್ತು. ಆದರೆ ಮಠಾಧೀಶರು, ಧಾರ್ಮಿಕ ಮುಖಂಡರು, ವಿವಿಧ ಸಂಘಟನೆಗಳು, ಪ್ರಮುಖ ಜಾತಿ ಸಂಘಟನೆಗಳು ಮರು ಗಣತಿಗೆ ಒತ್ತಾಯಿಸಿದ್ದರು. ಈ ಹಿಂದೆ ಮಾಡಿದ ಜಾತಿ ಗಣತಿಯಲ್ಲಿ ಹಲವು ಗೊಂದಲಗಳಿವೆ ಎಂದು ಆಕ್ಷೇಪಿಸಿದ್ದವು. ಸರ್ಕಾರಕ್ಕೆ ಮನವಿ ಸಲ್ಲಿಸಿ ಮರು ಸಮೀಕ್ಷೆಗೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ ಸೂಚನೆಯಂತೆ ಸರ್ಕಾರ ಮರು ಸಮೀಕ್ಷೆ ನಿರ್ಣಯ ಪ್ರಕಟಿಸಿರುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಈ ಸಮೀಕ್ಷೆ ನಿಗದಿತ ಕಾಲಾವಧಿಯಲ್ಲಿ ಮುಗಿಯಬೇಕು, ಗೊಂದಲಗಳು ಬಗೆಹರಿಯಬೇಕು ಎಂಬುದು ನಮ್ಮ ಸದಾಶಯ ಎಂದು ದಿನೇಶ್ ಗೂಳಿಗೌಡ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *