Menu

ಪಂಚಾಯತ್ ಸಭೆಗಳಲ್ಲಿ ತುಳು ಭಾಷೆಗೆ ನಿರ್ಬಂಧ: ಆಕ್ರೋಶದ ಬೆನ್ನಲ್ಲೇ ಆದೇಶ ವಾಪಸ್

ಕರ್ನಾಟಕದ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ ವಿಧಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ನಿರ್ಬಂಧ ವಾಪಸ್‌ ಪಡೆಯಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳಿಗೆ ನಿರ್ಬಂಧ ವಿಧಿಸುವಂತೆ ಸೂಚನೆ ನೀಡಲಾಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆದೇಶವನ್ನು ವಾಪಸ್ ಪಡೆಯಲಾಗಿದೆ.

ತಮಿಳು, ಕನ್ನಡ ಭಾಷೆಗಳಷ್ಟೇ ಪ್ರಾಚೀನವಾದ ಭಾಷೆ ತುಳು. ಇದಕ್ಕೆ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಆಗ್ರಹ, ಹೋರಾಟ ದಶಕಗಳದ್ದು. ತುಳು ಭಾಷೆ ಬಳಕೆ ಮಾಡಬಾರದು ಎನ್ನುವ ಸರ್ಕಾರಿ ಆದೇಶ ಕರಾವಳಿಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚಿಸುವಾಗ ತುಳು ಭಾಷೆ ಬಳಕ ಮಾಡದಂತೆ ಮತ್ತು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಪಂಚಾಯತ್‌ ಅಭಿವೃದ್ಧಿ, ಅಧಿಕಾರಿಯವರಿಗೆ ನಿರ್ದೇಶನ ನೀಡಲು ಮುರಳೀಧರ ಎಂಬವರು ಮನವಿ ಸಲ್ಲಿಸಿರುತ್ತಾರೆ. ಮನವಿ ಪರಿಶೀಲಿಸಿ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್‌ ಈ ಆದೇಶ ಮಾಡಿದೆ.

ವಿವಾದ ಭುಗಿಲೇಳುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್​ರನ್ನು ತುಳು ಸಂಘಟನೆಗಳ ಪ್ರಮುಖರು ಭೇಟಿಯಾಗಿ ಸುತ್ತೋಲೆಯನ್ನು ವಾಪಾಸ್ ಪಡೆಯಬೇಕಂದು ಆಗ್ರಹಿಸಿದ್ದಾರೆ. ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಈ ಸುತ್ತೋಲೆಯನ್ನು ವಾಪಾಸ್ ಪಡೆದಿದೆ.

Related Posts

Leave a Reply

Your email address will not be published. Required fields are marked *