Menu

ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ಉಚ್ಛಾಟನೆ

st somashekar

ಕಾಂಗ್ರೆಸ್ ನಿಂದ ವಲಸೆ ಬಂದಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಬಿಜೆಪಿ ಶಾಸಕರಾಗಿದ್ದರೂ ಕಾಂಗ್ರೆಸ್ ಪರ ಧೋರಣೆ ತಳೆದಿದ್ದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ 6 ವರ್ಷಗಳಕಾ ಉಚ್ಛಾಟಿಸಿ ಬಿಜೆಪಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

ಕೆಲವು ತಿಂಗಳ ಹಿಂದೆ ಬಿಜೆಪಿ ಶಿಸ್ತು ಸಮಿತಿ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ಕೇಳಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಇಬ್ಬರನ್ನು ಉಚ್ಚಾಟಿಸಿದೆ.

ಪಕ್ಷದಿಂದ ಉಚ್ಚಾಟನೆಗೆ ಪ್ರತಿಕ್ರಿಯಿಸಿದ ಶಿವರಾಮ್ ಹೆಬ್ಬಾರ್, ಪಕ್ಷದ ತೀರ್ಮಾನವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ಪಕ್ಷದ ಸಭೆಗಳಿಗೆ ನಮ್ಮನ್ನು ಕರೆಯುತ್ತಿರಲಿಲ್ಲ. ಪಕ್ಷದಲ್ಲಿ ನಮೆಗೆ ಯಾವುದೇ ಜವಾಬ್ದಾರಿ ನೀಡಿರಲಿಲ್ಲ. ಕೊಟ್ಟ ಜವಾಬ್ದಾರಿಗಳನ್ನು ಹಿಂದೆ ನಿಭಾಯಿಸಿದ್ದೇವೆ. ಈ ಬಗ್ಗೆ ಶೀಘ್ರದಲ್ಲೇ ಸುದ್ದಿಗೋಷ್ಠಿಯಲ್ಲಿ ಮುಂದಿನ ನಿರ್ಧಾರವನ್ನು ತಿಳಿಸುವುದಾಗಿ ಅವರು ಹೇಳಿದರು.

Related Posts

Leave a Reply

Your email address will not be published. Required fields are marked *