ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಸಿದ್ದರಾಮಾನಂದಪುರಿ ಮಹಾಸ್ವಾಮಿ ನಿಧನರಾಗಿದ್ದಾರೆ.
ಗುರುವಾರ ಬೆಳಗಿನ ಜಾವ 3:30ಕ್ಕೆ ಹೃದಯ ಸ್ತಂಭನಗೊಂಡು ಇಹಲೋಕ ತ್ಯಜಿಸಿದ್ದಾರೆ. ಜ.12, 13, 14 ರಂದು ಅದ್ಧೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿದ್ದರು. ಹಾಲುಮತ ಸಾಹಿತ್ಯ ಸಮ್ಮೇಳನ ಹಾಗೂ ಹಾಲುಮತ ಪೂಜಾರಿಗಳ ಶಿಬಿರವನ್ನೂ ನಿರ್ವಹಿಸಿದ್ದರು. ರಾಜಕೀಯ ವ್ಯಕ್ತಿಗಳಿಂದ ಮುಕ್ತವಾದ ಕಾರ್ಯಕ್ರಮ ಇದಾಗಿತ್ತು.
ಒಂದು ವಾರ ಸರಿಯಾಗಿ ಊಟ, ನಿದ್ದೆ ಮಾಡದೆ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರಿಂದ ಬುಧವಾರ ರಾತ್ರಿ ಲೋ ಬಿಪಿಯಿಂದ ಸ್ವಾಮೀಜಿ ಬಳಲಿದ್ದರು. ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಿದ್ದರಾಮಾನಂದ ಸ್ವಾಮೀಜಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಲಮರಹಳ್ಳಿಯವರು. ಮಹದೇವಯ್ಯ ಮತ್ತು ಜಯಮ್ಮ ದಂಪತಿಯ 2ನೇ ಪುತ್ರನಾಗಿದ್ದ ಅವರ ಮೂಲ ಹೆಸರು ಮೋಹನ್ ಪ್ರದಾನ ಆಗಿತ್ತು. 18ನೇ ವಯಸ್ಸಿಗೆ ಮನೆ ತೊರೆದು ಜೈನ, ಕ್ರೈಸ್ತ, ಬ್ರಹ್ಮಕುಮಾರಿ ಪಂಥಗಳ ಪ್ರಭಾವಕ್ಕೆ ಒಳಗಾಗಿದ್ದರು.
ಶರಣ ಸಾಹಿತ್ಯದ ಜೊತೆಗೆ ಎಲ್ಲಾ ಧರ್ಮಗಳ ಅಧ್ಯಯನ ಮಾಡಿದ ಸ್ವಾಮೀಜಿಳು ಚಿತ್ರದುರ್ಗದ ಮುರುಘಾಮಠದಲ್ಲಿಲ ಅಧ್ಯಯನ ಬಳಿಕ ನಾಲ್ಕು ವರ್ಷ ಸಿಂಧನೂರಿನಲ್ಲಿ ಸ್ವಾಮೀಜಿಯಾಗಿ ವಾಸ್ತವ್ಯ ಮಾಡಿದರು. ಬಳಿಕ ದೇವದುರ್ಗದ ತಿಂಥಣಿ ಬ್ರಿಜ್ಡ್ ಹತ್ತಿರ 2011 ರಲ್ಲಿ ಕನಕಗುರು ಪೀಠಕ್ಕೆ ಬಂದ ಸಿದ್ದರಾಮನಂದ ಸ್ವಾಮೀಜಿ ಕಾಗಿನೆಲೆ ಕನಕ ಗುರುಪೀಠ ಸ್ಥಾಪನೆ ಮಾಡಿದರು.
ಕಲಬುರಗಿ ವಿಭಾಗದ ಕನಕ ಗುರು ಪೀಠ ಪ್ರಾರಂಭಿಸಿ ಪ್ರತಿ ವರ್ಷ ಜನವರಿ 12, 13, 14 ಹಾಲುಮತ ಸಂಸ್ಕೃತಿ ವೈಭವ ನಡೆಸುತ್ತಿದ್ದರು. ಶಾಲಾ ಮಕ್ಕಳಿಗೆ ಉಚಿತ ದಾಸೋಹ ವ್ಯವಸ್ಥೆ, ಕನಕಗುರು ಪೀಠದಲ್ಲಿ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ರಕ್ತದಾನ ಆಯೋಜ ಜೊತೆಗೆ ಸಾಹಿತ್ಯ, ಸಮಾಜಸೇವೆ ಮಾಡಿದ ಗಣ್ಯರಿಗೆ ಭಾಸ್ಕರ, ಕನಕರತ್ನ, ಸಿದ್ಧ ಶ್ರೀ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು.


