ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ರಜೆಗಳಲ್ಲಿ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಬೆಂಗಳೂರು, ಮಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು ಕಾರ್ಯಾಚರಣೆ ಆರಂಭವಾಗಲಿದೆ ಎಂದು ನೈಋತ್ಯ ರೈಲ್ವೆಯು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ನೀಡಿದೆ.
ಬೆಂಗಳೂರು-ಮಡಗಾಂವ್ ಎಕ್ಸ್ಪ್ರೆಸ್: ರೈಲು ಸಂಖ್ಯೆ 06569: ಎಸ್ಎಮ್ವಿಟಿ ಬೆಂಗಳೂರು-ಮಡಗಾಂವ್ ರೈಲು ಆಗಸ್ಟ್ 26 ರಂದು ಎಸ್ಎಮ್ವಿಟಿ ಬೆಂಗಳೂರಿನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ನಸುಕಿನ ಜಾವ 5:30ಕ್ಕೆ ಮಡಗಾಂವ್ ತಲುಪಲಿದೆ. ಇದೇ ರೈಲು ವಾಪಸ್ 06570: ಆಗಸ್ಟ್ 27 ರಂದು ಬೆಳಿಗ್ಗೆ 6:30ಕ್ಕೆ ಮಡಗಾಂವ್ನಿಂದ ಹೊರಟು ಅದೇ ದಿನ ರಾತ್ರಿ 11:40 ಎಸ್ಎಮ್ವಿಟಿ ಬೆಂಗಳೂರು ತಲುಪಲಿದೆ. ಈ ರೈಲು ಚಿಕ್ಕಬಾನಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲ ಮತ್ತು ಕಾರವಾರಗಳಲ್ಲಿ ನಿಲುಗಡೆ ಇದೆ.
ಬೆಂಗಳೂರು-ಮಂಗಳೂರು: ರೈಲು ಸಂಖ್ಯೆ 06251: ಯಶವಂತಪುರ-ಮಂಗಳೂರು ಸೆಂಟ್ರಲ್ ರೈಲು ಯಶವಂತಪುರದಿಂದ ಆಗಸ್ಟ್ 25 ರಂದು ರಾತ್ರಿ 11:55ಕ್ಕೆ ಮರುದಿನ ಬೆಳಗ್ಗೆ 11:45 ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪುತ್ತದೆ. ರೈಲು ಸಂಖ್ಯೆ 06252: ಮಂಗಳೂರು ಸೆಂಟ್ರಲ್-ಯಶವಂತಪುರ ರೈಲು ಆಗಸ್ಟ್ 26 ರಂದು ಮಧ್ಯಾಹ್ನ 1ಗಂಟೆಗೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಅದೇ ದಿನ ರಾತ್ರಿ 10:40 ಕ್ಕೆ ಯಶವಂತಪುರ ತಲುಪುತ್ತದೆ. ರೈಲು ಸಂಖ್ಯೆ 06253: ಯಶವಂತಪುರ-ಮಂಗಳೂರು ಸೆಂಟ್ರಲ್ ರೈಲು ಆಗಸ್ಟ್ 26 ರಂದು ಯಶವಂತಪುರದಿಂದ ರಾತ್ರಿ 11:55 ಕ್ಕೆ ಹೊರಟು ಮರುದಿನ ಬೆಳಗ್ಗೆ 11:45 ಮಂಗಳೂರು ಸೆಂಟ್ರಲ್ ತಲುಪುತ್ತದೆ. ರೈಲು ಸಂಖ್ಯೆ 06254: ಮಂಗಳೂರು ಸೆಂಟ್ರಲ್-ಯಶವಂತಪುರ ರೈಲು ಆಗಸ್ಟ್ 27 ರಂದು ಮಧ್ಯಾಹ್ನ 2:15 ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಅದೇ ದಿನ ರಾತ್ರಿ 11:50 ಕ್ಕೆ ಯಶವಂತಪುರ ತಲುಪಲಿದೆ. ಈ ರೈಲುಗಳು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು ಮತ್ತು ಬಂಟ್ವಾಳಗಳಲ್ಲಿ ನಿಲುಗಡೆ ಇರುತ್ತದೆ.
ಬೆಂಗಳೂರು-ಬೀದರ್: ರೈಲು ಸಂಖ್ಯೆ 06549: ಎಸ್ಎಮ್ವಿಟಿ ಬೆಂಗಳೂರು-ಬೀದರ್ ರೈಲು ಆಗಸ್ಟ್ 26 ರಂದು ರಾತ್ರಿ 9:15ಕ್ಕೆ ಎಸ್ಎಮ್ವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 11:30ಕ್ಕೆ ಬೀದರ್ ತಲುಪಲಿದೆ. ವಾಪಸ್ 06550: ಬೀದರ್ನಿಂದ ಆಗಸ್ಟ್ 27 ರಂದು ಮಧ್ಯಾಹ್ನ 2:30ಕ್ಕೆ ಹೊರಟು ಮರುದಿನ ನಸುಕಿನ ಜಾವ 4:30ಕ್ಕೆ ಎಸ್ಎಮ್ವಿಟಿ ಬೆಂಗಳೂರು ತಲುಪಲಿದೆ. ಯಲಹಂಕ, ಹಿಂದುಪುರ, ಧರ್ಮಾವರಮ್, ಅನಂತಪುರ, ಗುಂಟಕಲ್, ಅದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಬಾದ್, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಬೆಂಗಳೂರು-ಹುಬ್ಬಳ್ಳಿ: ರೈಲು ಸಂಖ್ಯೆ 07341: ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ರೈಲು ಆಗಸ್ಟ್ 25 ರಂದು ಮಧ್ಯಾಹ್ನ 3:30 ಕ್ಕೆ ಯಶವಂತಪುರದಿಂದ ಹೊರಟು ಅದೇ ದಿನ ರಾತ್ರಿ 10:40 ಕ್ಕೆ ಹುಬ್ಬಳ್ಳಿ ತಲುಪಲಿದೆ. ರೈಲು ಸಂಖ್ಯೆ 07342: ಯಶವಂತಪುರ- ಎಸ್ಎಸ್ಎಸ್ ಹುಬ್ಬಳ್ಳಿ ರೈಲು ಆಗಸ್ಟ್ 28 ರಂದು ಯಶವಂತಪುರದಿಂದ ಮಧ್ಯರಾತ್ರಿ 12:15 ಕ್ಕೆ ಹೊರಟು ಬೆಳಿಗ್ಗೆ 09:45 ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ. ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರುಗಳಲ್ಲಿ ನಿಲುಗಡೆ ಇದೆ.
ರೈಲು ಸಂಚಾರ ದಿನಾಂಕ ವಿಸ್ತರಣೆ: ಈ ಹಿಂದೆ ಆಗಸ್ಟ್ 31 ರವರೆಗೆ ಸಂಚರಿಸುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 06539 SMVT ಬೆಂಗಳೂರು-ಬೀದರ್ ದ್ವೈವಾರಿಕ ವಿಶೇಷ ಎಕ್ಸ್ಪ್ರೆಸ್ ರೈಲು, ಸೆಪ್ಟೆಂಬರ್ 05 ರಿಂದ 28 ರವರೆಗೆ ಸಂಚರಿಸಲಿದೆ. ಈ ಹಿಂದೆ ಸೆಪ್ಟೆಂಬರ್ 01 ರವರೆಗೆ ಸಂಚರಿಸುವುದಾಗಿ ಸೂಚಿಸಲಾಗಿದ್ದ ರೈಲು ಸಂಖ್ಯೆ 06540 ಬೀದರ್-SMVT ಬೆಂಗಳೂರು ದ್ವೈವಾರಿಕ ವಿಶೇಷ ಎಕ್ಸ್ಪ್ರೆಸ್ ರೈಲು ಈಗ ಸೆಪ್ಟೆಂಬರ್ 06 ರಿಂದ 29 ರವರೆಗೆ ಓಡಲಿದೆ. ಆಗಸ್ಟ್ 25 ರವರೆಗೆ ಮಾತ್ರ ಸಂಚರಿಸುವುದಾಗಿ ಸೂಚಿಸಲಾಗಿದ್ದ ರೈಲು ಸಂಖ್ಯೆ 07315 SSS ಹುಬ್ಬಳ್ಳಿ-ಮುಜಫರ್ಪುರ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 01 ರಿಂದ 22 ರವರೆಗೆ ಸಂಚರಿಸಲಿದೆ. ಆಗಸ್ಟ್ 28 ರವರೆಗೆ ಮಾತ್ರ ಓಡುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 07316 ಮುಜಫರ್ಪುರ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 04 ರಿಂದ 12 ರವರೆಗೆ ಸಂಚರಿಸಲಿದೆ. ಈ ಹಿಂದೆ ಆಗಸ್ಟ್ 25 ರವರೆಗೆ ಮಾತ್ರ ಓಡುವುದಾಗಿ ತಿಳಿಸಲಾಗಿದ್ದ ರೈಲು ಸಂಖ್ಯೆ 07311 ವಾಸ್ಕೋ ಡ ಗಾಮಾ-ಮುಜಫರ್ ಪುರ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್, ಈಗ ಸೆಪ್ಟೆಂಬರ್ 8 ರಿಂದ 22 ರವರೆಗೆ ಓಡಲಿದೆ.