Menu

ಬೈಲಹೊಂಗಲದಲ್ಲಿ ಮಗುವಿಗೆ ಹಿಂಸೆ ನೀಡಿ ಭೀಕರವಾಗಿ ಕೊಲೆಗೈದ ಮಲ ತಂದೆ

ಬೆಳಗಾವಿಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪದಲ್ಲಿ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವನ್ನು ಕಟ್ಟಿಗೆಯಿಂದ ಹೊಡೆದು, ಎಲ್ಲೆಂದರಲ್ಲಿ ಸುಟ್ಟು ಕೊಲೆ ಮಾಡಿದ್ದಾನೆ.

ಕಾರ್ತಿಕ್ ಮುಕೇಶ್ ಮಾಂಜಿ ಹತ್ಯೆಯಾದ ಮಗು. ಮಲತಂದೆ ಮಹೇಶ್ವರ್ ಮಾಂಜಿ ಸ್ನೇಹಿತರಾದ ರಾಕೇಶ್ ಮಾಂಜಿ, ಮಹೇಶ್ ಮತ್ತು ಶ್ರೀನಾಥ್ ಮಾಂಜಿ ಜೊತೆ ಸೇರಿ ಕೊಲೆ ಮಾಡಿದ್ದಾರೆ.

ಮಗುವಿನ ತಾಯಿ ಮಹೇಶ್ವರ್ ಮಾಂಜಿಯನ್ನು ಎರಡನೇ ಮದುವೆಯಾಗಿ ಬಿಹಾರದಿಂದ ಬೆಳಗಾವಿಗೆ ಕೆಲಸಕ್ಕೆಂದು ಬಂದಿದ್ದರು. ತನ್ನೊಂದಿಗೆ 3 ವರ್ಷದ ಮಗ ಕಾರ್ತಿಕ್‌ನನ್ನು ಕರೆದುಕೊಂಡು ಬಂದಿದ್ದರು. ಇವರೆಲ್ಲ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಕೆಲಸ ಮಾಡಿಕೊಂಡಿದ್ದರು. ಆಕೆ ಮತ್ತು ಮಹೇಶ್ವರ್ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದರು. ಮಗನನ್ನು ಯಾಕೆ ಕರೆದುಕೊಂಡು ಬಂದಿದ್ದಿ ಎಂದು ಕುಡಿದು ಬಂದು ಹೆಂಡತಿ ಜೊತೆ ಮಹೇಶ್ವರ್ ಮಾಂಜಿ ಜಗಳ ಮಾಡಿದ್ದ. ಆತನ ಮೂರು ಸ್ನೇಹಿತರು ಸೇರಿಕೊಂಡು ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ ಮಗುವನ್ನು ಬಿಟ್ಟು ಮಹಿಳೆ ಓಡಿಹೋಗಿದ್ದರು.

ಅಲ್ಲೇ ಇದ್ದ ಮಗುವಿನ ಮೇಲೆ ಆರೋಪಿಗಳು ಮೆರೆದಿದ್ದು, ತಲೆಗೆ ಕಟ್ಟಿಗೆಯಿಂದ ಹೊಡೆದು, ಕಟ್ಟಿಗೆಗೆ ಬೆಂಕಿ ಹಚ್ಚಿ ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಹಿಳೆ ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯು ಮುರಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು 4 ಆರೋಪಿಗಳನ್ನು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *