accidents
ಬೆಂಗಳೂರು: ಪ್ರತ್ಯೇಕ ಅಪಘಾತ ಮೂವರ ಸಾವು
ಬೆಂಗಳೂರು: ನೆಲಮಂಗಲ ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಮೂರು ರಸ್ತೆ ಅಪಘಾತಗಳಲ್ಲಿ ಇಬ್ಬರು ಪಾದಚಾರಿಯರು ಸೇರಿ ಮೂವರು ಮೃತಪಟ್ಟಿದ್ದಾರೆ. ನೆಲಮಂಗಲ ಬಳಿಯ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಅಶೋಕ್ (27) ಮೃತಪಟ್ಟಿದ್ದಾರೆ. ನೆಲಮಂಗಲದ ಆಶೋಕ್ ಅವರು ರಸ್ತೆ ದಾಟುತ್ತಿದ್ದಾಗ ದುರ್ಘಟನೆ ನಡೆದಿದ್ದು ಅಪಘಾತ ನಡೆಸಿ ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗೆ ಶೋಧ ನಡೆಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮಾಕಳಿ