Menu

ಜಾತಿಗಣತಿ ಮುಂದೂಡಲು ಆಗ್ರಹ: ಮಲ್ಲಿಕಾರ್ಜುನ ಖರ್ಗೆಗೆ ಮನವಿ ಸಲ್ಲಿಕೆ

ಇಂದಿನಿಂದ ಕರ್ನಾಟಕದಾದ್ಯಂತ ಆರಂಭವಾಗಿರುವ ಜಾತಿ ಜನಗಣತಿ (ಸಾಮಾಜಿಕ, ಆರ್ಥಿಕ, ಶೈಕ್ಷಣಿಕ) ಸಮೀಕ್ಷೆಯನ್ನು ಮುಂದೂಡುವಂತೆ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಆಗ್ರಹಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಮುಖಂಡರು ಭೇಟಿಯಾಗಿ 15 ದಿನಗಳಲ್ಲಿ ಸಮೀಕ್ಷೆ ನಡೆಸುವುದು ಸಾಧ್ಯವಿಲ್ಲ ಎಂಬ ಕಾರಣದಿಂದಾಗಿ ಜಾತಿಗಣತಿ ಸಮೀಕ್ಷೆಯನ್ನು 3 ತಿಂಗಳು ಕಾಲ ಮುಂದೂಡಬೇಕೆಂದು ಒತ್ತಾಯಿಸಿದರು. ರಾಜ್ಯ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ

ಕೆಪಿಸಿಸಿ ಕಚೇರಿ, ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ

ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ