Menu

ಸೆಪ್ಟೆಂಬರ್ 6ರಂದು ಆಲಮಟ್ಟಿಯಲ್ಲಿ ಕೃಷ್ಣೆಗೆ ಸಿಎಂ ಬಾಗಿನ ಅರ್ಪಣೆ

ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ಸಹಯೋಗದಲ್ಲಿ ಸೆಪ್ಟೆಂಬರ್ 6ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಗೊಂಡಿರುವ ಹಿನ್ನೆಲೆ  ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ  ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಸಮರ್ಪಿಸಲಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ