Menu

ಪರವಾನಗಿ ಭೂಮಾಪಕರ ಕಾಯಂ, 36 ADLR ಗಳ ನೇಮಕ: ಸಿಎಂ ಸಿದ್ದರಾಮಯ್ಯ

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR (ಭೂ ದಾಖಲೆಗಳು ಮತ್ತು ಸರ್ವೆ ಇತ್ಯರ್ಥ ಸಹಾಯಕ ನಿರ್ದೇಶಕರು) ಗಳ ನೇಮಕ ಮಾಡಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.  ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು ಎಂದೂ ಹೇಳಿದ್ದಾರೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ