Saturday, September 12, 2026
Menu

ವಿಪ್ರೋ ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ಸಾಧ್ಯವಿಲ್ಲ: ಸಿಎಂ ಮನವಿಯನ್ನು ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಸರ್ಜಾಪುರದ ವಿಪ್ರೋ ಕ್ಯಾಂಪಸ್ ಮೂಲಕ ವಾಹನಗಳ ಸೀಮಿತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ಅಜೀಮ್ ಪ್ರೇಮ್ ಜೀ ತಿರಸ್ಕರಿಸಿದ್ದಾರೆ. ವಿಪ್ರೋ ಖಾಸಗಿ ಆಸ್ತಿಯಾಗಿದ್ದು, ಕಟ್ಟುನಿಟ್ಟಿನ ಭದ್ರತಾ ನಿಯಮಗಳನ್ನ ಹೊಂದಿದೆ. ಸಾರ್ವಜನಿಕ ರಸ್ತೆಗಾಗಿ ನಮ್ಮ ಕ್ಯಾಂಪಸ್ ತೆರೆದಿಡಲು ಸಾಧ್ಯವಿಲ್ಲಎಂದು ಸಿದ್ದರಾಮಯ್ಯನವರ ಪತ್ರಕ್ಕೆ ಪ್ರತ್ಯುತ್ತರ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಮನವಿಗೆ ಪ್ರತಿಕ್ರಿಯಿಸಿದ ಪ್ರೇಮ್‌ಜಿ, ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮೂಲಕ ಸಂಚಾರ ದಟ್ಟಣೆ ಪರಿಹಾರಕ್ಕಾಗಿ ವೈಜ್ಞಾನಿಕ

ನಾಳೆ‌‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಜಿಟಿ ಕದನ:‌ ಟ್ರಾಫಿಕ್ ಪೊಲೀಸ್‌ ಅಲರ್ಟ್‌

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಅನ್ನು ಎದುರಿಸಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಧತೆ ಮಾಡಿಕೊಂಡು, ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್‌ ನಿರ್ವಹಣೆಗೆ ಹಲವು ಕ್ರಮ ಕೈಗೊಂಡು

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ಜಾರಿ ಚಿಂತನೆ: ಪರಮೇಶ್ವರ್‌

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿಭಾಗವು ನಗರದ ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಆಯೋಜಿಸಿದ್ದ ನಗರ ಚಲನಶೀಲತೆ ಸವಾಲುಗಳು