Illegal Bangladeshis
ಅಕ್ರಮ ಬಾಂಗ್ಲಾ ದೇಶಿಗಳಿಗೆ ಮನೆ ನೀಡುವುದಿಲ್ಲ, ರಾಜ್ಯದಿಂದ ಹೊರಗೆ ಕಳಿಸಲಾಗುವುದು: ಸಿಎಂ
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಸಿಎಂ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಪದ್ಮಶ್ರೀ ವಿಜೇತ ಮಾಜಿ ರಾಜ್ಯಸಭಾ ಸದಸ್ಯೆ ಜಯಶ್ರೀ ಯವರ ಭೂಮಿಯ ಸರ್ವೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಯು ಕರ್ತವ್ಯಚ್ಯುತಿ ಮಾಡಿದ್ದರೆ, ಅವರ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ತಪ್ಪು ಎಸಗಿದ ಅಧಿಕಾರಿಯ ಮೇಲೆ


