Menu

ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್‌, ಇಂಡಿ ಪರಾಮರ್ಶೆ ಮಾಡಲಿ: ಆರ್‌ ಅಶೋಕ

ತಮಿಳುನಾಡಲ್ಲಿ ಡಿಎಂಕೆ ಜೊತೆ ಚುನಾವಣೆ ಎದುರಿಸಿದ ಕಾಂಗ್ರೆಸ್‌, ಈಗ ಅದೇ ಪಕ್ಷಕ್ಕೆ ಕೈ ಕೊಟ್ಟಿದೆ. ಇಂಡಿ ಒಕ್ಕೂಟದ ಮಿತ್ರಪಕ್ಷಗಳು ಈ ಬಗ್ಗೆ ಪರಾಮರ್ಶೆ ಮಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಕಾಂಗ್ರೆಸ್‌ನ ಬಣ್ಣ ಬಯಲಾಗಿದೆ. ಕಾಂಗ್ರೆಸ್‌ನ ಸ್ನೇಹ ಮಾಡಿದ ಡಿಎಂಕೆ ಪಕ್ಷದ ನಾಯಕರು ಈಗ ಸಪ್ಪೆ ಮೋರೆ ಹಾಕಿಕೊಂಡಿದ್ದಾರೆ. ಚುನಾವಣೆ ಬಳಿಕ ಒಂದಾಗಿ ಸರ್ಕಾರ ರಚಿಸಬೇಕೆಂದು ತೀರ್ಮಾನವಾಗಿತ್ತು. ಫಲಿತಾಂಶ ಬಂದ ನಂತರ

ಎಳನೀರು ಮಾರುವ ಮಹಿಳೆಯ ಹನಿಟ್ರಾಪ್‌ಗೆ ಸಿಲುಕಿದ ಇಂಡಿ ಬ್ಯಾಂಕ್‌ ಮ್ಯಾನೇಜರ್‌

ವಿಜಯಪುರದ ಡಿಯ ಡಿ‌ವೈಎಸ್ಪಿ ಕಚೇರಿ ಪಕ್ಕ ಹಲವು ವರ್ಷಗಳಿಂದ ಎಳನೀರು ಮಾರಿಕೊಂಡಿದ್ದ ಮಹಿಳೆ ಬ್ಯಾಂಕ್ ಮ್ಯಾನೇಜರ್‌ನನ್ನು ಹನಿಟ್ರಾಪ್‌ ಮಾಡಿ ಬೆದರಿಸಿ ಹಣ ಸುಲಿಗೆಗೆ ಯತ್ನಿಸಿ ಅರೆಸ್ಟ್‌ ಆಗಿದ್ದಾಳೆ. ಪ್ರಕರಣ ಸಂಬಂಧ ಆರೋಪಿ ಮಹಿಳೆ, ಆಕೆಯ ಮಗ ಹಾಗೂ ಯ್ಯೂಟೂಬ್‌ ಪತ್ರಕರ್ತನನ್ನೂ ಬಂಧಿಸಲಾಗಿದೆ.