Menu

ಎನ್‌ಒಸಿಗಳ ನೀಡಿಕೆ ಕಾಲಮಿತಿ ಕಡಿಮೆ ಮಾಡಬೇಕು: ಹೂಡಿಕೆ ಆಕರ್ಷಣೆ ಸಭೆಯಲ್ಲಿ ಸಿಎಂ ಸೂಚನೆ

ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯಮಂತ್ರಿ  ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ  ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯಲ್ಲಿ ಈ ಸೂಚನೆ ನೀಡಿದರು. ಡಿಸಿಎಂ