Iqbal Hussain
ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗುರುವಾರ ಶಿವಕುಮಾರ್ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿ, ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ. ಅಧಿವೇಶನ ಮುಗಿದ ತಕ್ಷಣ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು. ಗುರುವಾರ ನಡೆದದ್ದು


