JDS Politics
ರಾಮನಗರ ಮಣ್ಣನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ: ನಿಖಿಲ್ ಕುಮಾರಸ್ವಾಮಿ
ರಾಮನಗರ ನಮ್ಮ ತಂದೆಯ ಕರ್ಮಭೂಮಿ ಮತ್ತು ನಮ್ಮ ತಾತನಿಗೆ ರಾಜಕೀಯ ಮರುಜನ್ಮ ನೀಡಿದ ಪುಣ್ಯಭೂಮಿ, ಹಾಗಾಗಿ ಆ ಮಣ್ಣನ್ನು ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮನಗರ ಜಿಲ್ಲೆ ನನ್ನ ತಂದೆಯವರ ಕರ್ಮಭೂಮಿ. 1994ರಲ್ಲಿ ಹಾಸನದಿಂದ ಬಂದಂತಹ ನಮ್ಮ ತಾತ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜಕೀಯವಾಗಿ ಮರುಜನ್ಮ ನೀಡಿದ ಪುಣ್ಯ ಭೂಮಿ ಅದು. ಅಂತಹ


