Menu

ಬೆಳಗಾವಿಯಲ್ಲಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಮಹಿಳೆಯ ಕೊಲೆಗೈದು ಚಿನ್ನಾಭರಣ ಕಳವು

ಬೆಳಗಾವಿ ಜಿಲ್ಲೆಯ ಗಣೇಶಪುರದ ಲಕ್ಷ್ಮಿ ನಗರದಲ್ಲಿ ಅಪಾರ್ಟ್​ಮೆಂಟ್​ಗೆ ನುಗ್ಗಿ ಮಂಗಳಸೂತ್ರ ಕಿತ್ತುಕೊಂಡು ಕತ್ತು ಹಿಸುಕಿ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಲಕ್ಷ್ಮಿ ನಗರದ ನಿವಾಸಿ ಅಂಜನಾ ಅಜೀತ ದಡ್ಡೀಕರ್(53) ಕೊಲೆಯಾದವರು. ಅಪಾರ್ಟ್​ಮೆಂಟ್ ಮನೆಯಲ್ಲಿ ಗಂಡ-ಹೆಂಡತಿ ಮಾತ್ರ ವಾಸವಾಗಿದ್ದರು. ಪತಿ ಅಜಿತ್ ಆಟೋ ಓಡಿಸುತ್ತಾರೆ. ಅವರು ಕೆಲಸ ಮುಗಿಸಿ ಸಂಜೆ ಮನೆಗೆ ಬಂದಾಗ ಪತ್ನಿ ಕೊಲೆಯಾಗಿದ್ದರು. ಪ್ರಜ್ಞೆತಪ್ಪಿ ಬಿದ್ದಿದ್ದ ಅಂಜನಾ ಅವರನ್ನು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಫಲಕಾರಿಯಾಗಿಲ್ಲ. ಕೊರಳಲ್ಲಿದ್ದ ಮಂಗಳಸೂತ್ರ,