Wednesday, August 12, 2026
Menu

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು