Kamalakara Bhat Guruji
ಕಮಲಾಕರ ಭಟ್ ಗುರೂಜಿ ಅಕ್ರಮ ಸಂಬಂಧ: ಮಹಿಳೆಯ ಪತಿ ದೂರು ನೀಡಿದ್ದಕ್ಕೆ ಹಲ್ಲೆ, ಒಬ್ಬನ ಕೊಲೆ
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಕಮಲಾಕರ ಭಟ್ ಗುರೂಜಿ ಶಿವಮೊಗ್ಗದ ಮಹಿಳೆ ಜೊತೆ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಮಹಿಳೆಯ ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ, ಗುರೂಜಿ ಹಾಗೂ ಇತರರು ಸೇರಿ ಮೂವರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಗುರೂಜಿ ಜೊತೆ ಮಹಿಳೆಯ ಅನೈತಿಕ


