Menu

ಟ್ರ್ಯಾಕ್ಟರ್‌ ಚಲಿಸುವಾಗ ರೀಲ್ಸ್‌ ಮಾಡುತ್ತಿದ್ದ ಚಾಲಕ ಚಕ್ರಕ್ಕೆ ಸಿಲುಕಿ ಸಾವು

ಕಲಬುರಗಿಯ ಕಮಲಾಪುರ ತಾಲೂಕಿನ ಮಹಾಗಾಂವದಲ್ಲಿ ಟ್ರ್ಯಾಕ್ಟರ್‌ ಚಲಿಸುವಾಗ ರೀಲ್ಸ್‌ ಮಾಡುತ್ತಿದ್ದ ಚಾಲಕ ಅದೇ ಟ್ರ್ಯಾಕ್ಟರ್‌ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ. ಮಹಾಗಾಂವ ಗ್ರಾಮದ ನಿವಾಸಿ ಲೋಕೇಶ ಕಲ್ಲಪ್ಪ ಪೂಜಾರಿ (22) ಮೃತ ಚಾಲಕ ಎಂದು ಗುರುತಿಸಲಾಗಿದೆ. ಗ್ರಾಮದ ಕಬ್ಬಿನ ಗದ್ದೆಯಲ್ಲಿ ಟ್ರ್ಯಾಕ್ಟರ್‌ನಿಂದ ನೇಗಿಲು ಹೊಡೆಯುತ್ತಿರುವಾಗ ಒಂದು ಕೈಯಲ್ಲಿ ಮೊಬೈಲ್ ಹಿಡಿದು ರೀಲ್ಸ್ ಮಾಡುತ್ತಿದ್ದ. ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದ. ಆಯ‌ತಪ್ಪಿ ಕಾಲು ಜಾರಿ ಟ್ರ್ಯಾಕ್ಟರ್ ಚಕ್ರದ ಅಡಿಗೆ ಬಿದ್ದು ಟ್ರ್ಯಾಕ್ಟರ್

ಕಾರು ಡಿಕ್ಕಿಯಾಗಿ ಉರಿದ ಬೈಕ್‌: ಕಲಬುರಗಿಯಲ್ಲಿ ಸವಾರರಿಬ್ಬರು ಸಜೀವ ದಹನ

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿ ಬೆಂಕಿಹೊತ್ತಿಕೊಂಡು ಅದರಲ್ಲಿದ್ದ ಸವಾರರಿಬ್ಬರು ಸಜೀವ ದಹನಗೊಂಡಿದ್ದಾರೆ. ಸಿರಗಾಪುರ ಗ್ರಾಮದ ಆಕಾಶ ಧನವಂತ (19) ಮತ್ತು ಭೂಸಣಗಿ ಗ್ರಾಮದ ಸುಶೀಲ್ (28) ಬೆಂಕಿಗೆ ಬಲಿಯಾದವರು. ಮಹಾಗಾಂವ್