Kanakotsava
ನಾಳೆ ಕನಕೋತ್ಸವಕ್ಕೆ ಚಾಲನೆ, “ಮನರೇಗಾ” ಮಕ್ಕಳಿಗೆ ಚಿತ್ರ ಸ್ಪರ್ಧೆ: ಡಿಕೆ ಶಿವಕುಮಾರ್
ಜನವರಿ 28ರಂದು ಬೆಳಗ್ಗೆ 5 ಗಂಟೆಗೆ ಕನಕೋತ್ಸವ ಕಾರ್ಯಕ್ರಮ ಅಧಿಕೃತವಾಗಿ ಆರಂಭವಾಗಲಿದೆ. ಯೋಗ ಗುರು ವಚನಾನಂದ ಸ್ವಾಮೀಜಿ ಅವರು ಆಗಮಿಸುತ್ತಿದ್ದಾರೆ.”ಮನರೇಗಾ” ಯೋಜನೆ ವಿಷಯದಲ್ಲಿ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡಿದ್ದೇವೆ. ಜನಪದ, ದೇಶಭಕ್ತಿ ಗೀತೆ, ಸಿನಿಮಾ ಗೀತೆಗಳ ಜಿಲ್ಲಾ ಮಟ್ಟದ ಸ್ಪರ್ಧೆ ಏರ್ಪಡಿಸಲಾಗುವುದು. 30ರಂದು ನಂತರ ಭಾರತೀಯ ಸಾಂಪ್ರದಾಯಿಕ ಉಡುಗೆ ತೊಡುಗೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ರಘು ದೀಕ್ಷಿತ್ ಹಾಗೂ ಸಂಚಿತ್ ಹೆಗಡೆ ಅವರ ತಂಡಗಳಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ


