kannada news
ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಮಂಗಳವಾರ ಹೇಳಿದರು. ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ವಿಧಾನಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ವಸತಿ


