Menu

ಕನ್ನಡಿಗರಿಗೆ ಸೇರಿದ ಕೋಗಿಲು ಜಮೀನು ಬಾಂಗ್ಲಾದವರಿಗೆ ನೀಡಲು ಬಿಡುವುದಿಲ್ಲ: ಬಿಜೆಪಿ

ಬಾಂಗ್ಲಾದೇಶದ ಜನರಿಗೆ ಕೋಗಿಲು ಕ್ರಾಸ್‌ನಲ್ಲಿ ಒಂದು ಮನೆ ನೀಡಿದರೂ ಅದು ಕೆಟ್ಟ ಪರಂಪರೆಗೆ ನಾಂದಿ ಹಾಡಲಿದೆ. ಕನ್ನಡಿಗರಿಗೆ ಸೇರಿದ ಜಮೀನನ್ನು ಬಾಂಗ್ಲಾ ಜನರಿಗೆ ನೀಡಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಎಚ್ಚರಿಕೆ ನೀಡಿದರು. ಕೋಗಿಲು ಕ್ರಾಸ್‌ ಬಳಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ ಬೇರೆ  ಜಿಲ್ಲೆಗಳಿಂದ ಬಡವರು ಬಂದಿದ್ದಾರೆ. ಅನೇಕರು ಮನೆ ಇಲ್ಲದೆ ಪಾದಚಾರಿ ಮಾರ್ಗದಲ್ಲಿ ಮಲಗುತ್ತಿದ್ದಾರೆ. ಇಂತಹವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ