Karaga Mahotsav
ಏ.4ರಿಂದ 14ರವರೆಗೆ ಬೆಂಗಳೂರು ಕರಗ ಮಹೋತ್ಸವ
ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ಏ.4ರಿಂದ ಏ.14ರವರೆಗೆ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ವರ್ಷ 15ನೇ ಬಾರಿಗೆ ಕರಗ ಹೊರಲಿದ್ದಾರೆ. ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದೆ. ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ.


