Karnataka achievers
ಪದ್ಮ ಪ್ರಶಸ್ತಿ ಪುರಸ್ಕೃತರಲ್ಲಿ ರಾಜ್ಯದ ಆರು ಸಾಧಕರು
ಕೇಂದ್ರ ಸರ್ಕಾರ ಈ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಘೋಷಿಣೆ ಮಾಡಿದ್ದು, ಕರ್ನಾಟಕದ ವಿವಿಧ ಕ್ಷೇತ್ರಗಳ ಒಟ್ಟು 9 ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಒಬ್ಬರಿಗೆ ಪದ್ಮ ವಿಭೂಷಣ, ಇಬ್ಬರಿಗೆ ಪದ್ಮ ಭೂಷಣ, ಆರು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ರಾಜ್ಯದಿಂದ ಕಲಾ ವಿಭಾಗದಲ್ಲಿ ಸಾಧನೆಗಾಗಿ ಲಕ್ಷ್ಮೀನಾರಾಯಣ ಸುಬ್ರಹ್ಮಣ್ಯಂಗೆ ಪದ್ಮವಿಭೂಷಣ, ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆಗಾಗಿ ಅರಕಲಗೂಡು ಸೂರ್ಯಪ್ರಕಾಶ್ ಮತ್ತು ಕಲಾ ವಿಭಾಗದಲ್ಲಿ ಸಾಧನೆಗಾಗಿ ಅನಂತನಾಗ್ಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.