Karnataka Census 2025
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿರಾಕರಿಸಿದ ಸಂಸದೆ ಸುಧಾಮೂರ್ತಿ
ಕರ್ನಾಟಕ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸಿ ಬಿಜೆಪಿ ನಾನಾ ವಾಗ್ದಾಳಿ ನಡೆಸುತ್ತ, ಸಮೀಕ್ಷೆಯಲ್ಲಿ ಭಾಗವಹಿಸದಂತೆ ಸಾರ್ವಜನಿಕರನ್ನು ಪ್ರಚೋದಿಸುತ್ತ ಬಂದಿರುವ ಮಧ್ಯೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ
ಅಕ್ಟೋಬರ್ 18 ರವರೆಗೆ ಮನೆ ಮನೆ ಸಮೀಕ್ಷೆ: ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ
ಮನೆ ಮನೆ ಸಮೀಕ್ಷೆ ಅಕ್ಟೋಬರ್ 18 ರ ವರೆಗೆ ನಡೆಯಲಿದ್ದು, ಅಲ್ಲಿವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ. PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ, ವಿಶೇಷ ಬೋಧನಾ ತರಗತಿಗಳ ಮೂಲಕ ಶಿಕ್ಷಕರು ಪಠ್ಯ ಪೂರ್ಣಗೊಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.



