Menu

ಆಂಧ್ರದ ಗಣಿಗಾರಿಕೆ ಪರ್ಮಿಟ್‌, ಕರ್ನಾಟಕ ಭೂ ಒತ್ತುವರಿ: ಜನಾರ್ದನ ರೆಡ್ಡಿ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಂಧ್ರದ ಗಣಿಗಾರಿಕೆ ಪರವಾನಗಿ ಪಡೆದುಕೊಂಡು ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಸಾಬೀತಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಸರ್ವೆಯಲ್ಲಿ ಈ ವಿಚಾರ ಬಯಲಾಗಿದೆ. ಹೀಗಾಗಿ ಜನಾದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ. ಕಳೆದ ತಿಂಗಳು ನಿವೃತ್ತ ನ್ಯಾಯಾಧೀಶ ಸುಧಾಂಶ ಧುಲಿಯಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೋನ್ ಮೂಲಕ ಸಮೀಕ್ಷೆ ನಡೆಸಿದೆ.