Kartnataka govt
ಕೊಪ್ಪಳದಲ್ಲಿ ಹಾನಿಕಾರಕ ಕೈಗಾರಿಕೆ ಸ್ಥಾಪಿಸ ಬೇಡಿ: ಸಚಿವ ಹೆಚ್ಡಿ ಕೆ
ಪರಿಸರಕ್ಕೆ ಹಾಗೂ ಸಾಮಾನ್ಯ ಜನರಿಗೆ ಹಾನಿಕಾರಕ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದು ಉಚಿತವಲ್ಲ ಎಂದು ರಾಜ್ಯ ಸರಕಾರಕ್ಕೆ ಹೇಳಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದವರ ಜೊತೆಗೆ ಮಾತನಾಡಿ, ಕೊಪ್ಪಳ ನಗರದಲ್ಲಿ ಬಲ್ದೋಟ ಸಮೂಹದ ಉದ್ದೇಶಿತ ಉಕ್ಕು ಕಾರ್ಖಾನೆ ಸ್ಥಾಪನೆಗೆ ವ್ಯಕ್ತವಾಗಿರುವ ವಿರೋಧ ಹಾಗೂ ಶ್ರೀ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಯವರ ನಿಲುವಿನ