Menu

ಕೆಂಪೇಗೌಡರ ಸ್ಮಾರಕ ಅಭಿವೃದ್ಧಿಗೆ ₹103 ಕೋಟಿ, ಕಾಲೇಜು ಸ್ಥಾಪನೆಗೆ ₹100 ಕೋಟಿ: ಡಿಸಿಎಂ‌ 

ನಾಡಪ್ರಭು ಕೆಂಪೇಗೌಡರ ಎಲ್ಲಾ ಸ್ಮಾರಕಗಳನ್ನು ಪುನರುಜ್ಜೀವನಗೊಳಿಸಲು ₹103 ಕೋಟಿ ಅನುದಾನ ಹಾಗೂ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ನಗರ ವಿನ್ಯಾಸ ಕಾಲೇಜು ಸ್ಥಾಪನೆಗೆ ₹100 ಕೋಟಿ ಅನುದಾನ ಮೀಸಲಿಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು. ಮಾಗಡಿ ಕೋಟೆಯ ಪುನರುಜ್ಜೀವನ ಕೆಲಸ ಶೇ. 50ರಷ್ಟು ಮುಗಿದಿದೆ. ಆಂತರಿಕ ಸಮನ್ವಯತೆ ಸಾಧಿಸಲು ಸಮಿತಿಯನ್ನು ರಚಿಸಲಾಗುವುದು. ಕೆಂಪೇಗೌಡರ ಸಮಾಧಿ ಸ್ಥಳದಲ್ಲಿ 10 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳುತ್ತಿದ್ದು ಶೇ.90