Menu

ಉಪ್ಪಿಟ್ಟು ಬದಲು ಬಿರಿಯಾನಿ ಕೊಡಿ: ಅಂಗನವಾಡಿ ಬಾಲಕನ ಬೇಡಿಕೆ ವೈರಲ್!

ಅಂಗನವಾಡಿಯಲ್ಲಿ ಉಪ್ಪಿಟ್ಟು ಕೊಡುವ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ಕೊಡುವಂತೆ ಬಾಲಕ ಮನವಿ ಮಾಡಿದ ವೀಡಿಯೋ ವೈರಲ್ ಆಗಿದ್ದು, ಕೇರಳ ಸರ್ಕಾರ ಪ್ರತಿಕ್ರಿಯೆ ನೀಡಿದೆ. ಬಾಲಕನ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯಿಸಿದ್ದು, ಅಂಗನವಾಡಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಮೆನು ಪರಿಶೀಲಿಸಿ ಪರಿಷ್ಕರಿಸುವುದಾಗಿ ಭರವಸೆ ನೀಡಿದ್ದಾರೆ. ಶಂಕು ಎಂಬ ಪುಟ್ಟ ಬಾಲಕ ಊಟದ ಮೆನುವಿನಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ, ಚಿಕನ್ ಫ್ರೈ ನೀಡಬೇಕು ಎಂದು ಮಾಡಿದ