Menu

ಹಾಸನದಲ್ಲಿ ಹಾವನ್ನು ಕೊಂದು ಮಾಲೀಕನ ಜೀವವುಳಿಸಿ ಪ್ರಾಣ ತೆತ್ತ ನಾಯಿ

ಹಾಸನ ತಾಲೂಕಿನ ಕಟ್ಟಾಯ ಗ್ರಾಮದಲ್ಲಿ ಸಾಕು ನಾಯಿಯೊಂದು ಮನೆ ಮಾಲೀಕರು ಹಾಗೂ ಕೆಲಸಗಾರರ ಜೀವ ಉಳಿಸಲು ಪ್ರಾಣವನ್ನೇ ಪಣಕಿಟ್ಟು ಅಸು ನೀಗಿದೆ. ಸರ್ಪದ ಜತೆ ಕಾದಾಡಿದ ಪಿಟ್‌ಬುಲ್ ನಾಯಿಯ ಮುಖಕ್ಕೆ ಸರ್ಪ ಕಚ್ಚಿದ್ದರಿಂದ ಪ್ರಾಣ ಕಳೆದುಕೊಂಡಿದೆ. ಶಮಂತ್ ಎಂಬವರು ತೋಟದಲ್ಲಿ ಪಿಟ್‌ಬುಲ್ ಹಾಗೂ ಡಾಬರ್‌ಮನ್ ನಾಯಿಗಳನ್ನು ಸಾಕಿದ್ದರು. ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಹನ್ನೆರಡು ಅಡಿ ಉದ್ದದ ಸರ್ಪವೊಂದು ಮನೆಯ ಕಡೆಗೆ ಬಂದಿದೆ. ಮನೆಯ ಮುಂದೆ ಮಕ್ಕಳು ಆಟವಾಡುತ್ತಿದ್ದಾಗ ಬಂದ