Wednesday, September 17, 2025
Menu

ದಲಿತ ವಿದ್ಯಾರ್ಥಿಗಳ ಊಟದ ತಟ್ಟೆ ತೊಳೆಯಲ್ಲವೆಂದ ಸಹಾಯಕಿ ಮನೆಗೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆಗಳನ್ನು ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯನ್ನು ಜಿಲ್ಲಾಡಳಿತ ಮನೆಗೆ ಕಳಿಸಿ ಪರ್ಯಾಯ ವ್ಯವಸ್ಥೆ ಮಾಡಿದೆ. ಅಡುಗೆ ಸಹಾಯಕಿಯ ಈ ಕಾರ್ಯವೈಖರಿಯಿಂದ ಮಧ್ಯಾಹ್ನದ ಬಿಸಿಯೂಟ ಸ್ಥಗಿತರೊಂಡು, ಮಕ್ಕಳು ಉಪ್ಪಿಟ್ಟು ರಾಗೀಗಂಜಿ ಕುಡಿದು ಮನೆಗೆ ಮರಳುತ್ತಿರು ವುದು ಮಾಧ್ಯಮದಲ್ಲಿ ವರದಿಯಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾಡಳಿತ, ಕೂಡಳೇ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ