Tuesday, September 08, 2026
Menu

ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ

ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ತಿದ್ದುಪಡಿ ಮಸೂದೆ ಪ್ರಕಾರ ನೇಮಕಾತಿ ಸಂದರ್ಶನ ಮಂಡಳಿಯಲ್ಲಿ ಆಯೋಗ ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಲಿದ್ದಾರೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಗೆಜೆಟೆಡ್