Sunday, September 20, 2026
Menu

ಕೃಷ್ಣಾ -ಕಾವೇರಿ ಜಲಹಂಚಿಕೆಯಲ್ಲಿ ರಾಜ್ಯವೆಂದೂ ನೀರುಗಂಟಿಯೇ…!

ಕರ್ನಾಟಕದ ಜನತೆಯ ಪಾಲಿಗೆ ಆಲಮಟ್ಟಿ, ತುಂಗಭದ್ರಾ, ಕೆಆರ್‌ಎಸ್ ಅಣೆಕಟ್ಟುಗಳು ಕಾಮಧೇನುವಲ್ಲ, ಕಲ್ಪ ವೃಕ್ಷವೂ ಆಗಿಲ್ಲ. ಏಕೆಂದರೆ ನದಿದಂಡೆ ಮೇಲಿನ ಭಾಗದಲ್ಲಿರುವ ರಾಜ್ಯಕ್ಕೆ ಇದುವರೆಗೆ ಸಿಕ್ಕಿದ್ದು ಬೊಗಸೆ ನೀರು. ಆದರೆ ಆಂಧ್ರ ಮತ್ತು ತಮಿಳುನಾಡಿಗೆ ದೊರೆತಿದ್ದು ಹಂಡೆಯಷ್ಟು.. ಕೃಷ್ಣಾ – ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ , ಕಳೆದ ಎಪ್ಪತ್ತು ವರ್ಷಗಳಿಂದಲೂ ಕರ್ನಾಟಕ ರಾಜ್ಯವು ಮಾಡಿದ್ದು ನೀರುಗಂಟಿ ಕೆಲಸವನ್ನೇ.. !! ಆದರೆ ಈ ಕೆಲಸ ಮಾಡಲು ಮಾನಸಿಕ ಮತ್ತು ಭೌತಿಕವಾಗಿ