Menu

ಕೋಟಿ ರೂ. ವಿಮೆ ಹಣ ಪಡೆಯಲು ಅಮಾಯಕನನ್ನು ತನ್ನ ಕಾರಲ್ಲಿ ಸುಟ್ಟು ಹಾಕಿದಾತ ಅರೆಸ್ಟ್‌

ಮಹಾರಾಷ್ಟ್ರದ ಲಾತೂರಿನಲ್ಲಿ ಒಂದು ಕೋಟಿ ರೂ. ವಿಮೆ ಹಣ ಪಡೆಯಲು ಲಿಫ್ಟ್‌ ಕೊಡೋದಾಗಿ ನಂಬಿಸಿ ವ್ಯಕ್ತಿಯೊಬ್ಬನನ್ನು ಕರೆದೊಯ್ದು ಕಾರಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ವಸೂಲಾತಿ ಏಜೆಂಟ್ ಗಣೇಶ್ ಚೌಹಾಣ್​ ಬಂಧಿತ ಆರೋಪಿ. ಆತ ಒಂದು ಕೋಟಿ ರೂ. ವಿಮೆ ಹಣವನ್ನು ಪಡೆಯುವ ಉದ್ದೇಶಕ್ಕ್ಕಾಗಿ ತಾನೇ ಸತ್ತಿರುವುದೆಂದು ನಂಬಿಸಲು ಮತ್ತೊಬ್ಬ ವ್ಯಕ್ತಿಗೆ ತನ್ನ ಕಾರಿನಲ್ಲೇ ಬೆಂಕಿ ಹಚ್ಚಿ ಪರಾರಿಯಾಗಿದ್ದ. ತುಳಜಾಪುರ ಸಮೀಪ ಭಾನುವಾರ ಕಾರು ಸುಟ್ಟುಕರಕಲಾಗಿ ಪತ್ತೆಯಾಗಿತ್ತು,