lawyer sucide case
ವಕೀಲೆ ಜೀವಾ ಆತ್ಮಹತ್ಯೆ ಹಿಂದೆ: ಡಿವೈಎಸ್ಪಿ ಕನಕಲಕ್ಷ್ಮೀ ಕಿರುಕುಳ ಸಾಬೀತು: 2,300 ಪುಟಗಳ ಅಂತಿಮ ವರದಿ ಸಲ್ಲಿಕೆ
ಬೆಂಗಳೂರು:ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ಐಪಿಎಸ್ ಅಧಿಕಾರಿಗಳಾದ ವಿನಾಯಕ್ ವರ್ಮಾ, ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ವಿಶೇಷ ತನಿಖಾ ತಂಡವು ಸಲ್ಲಿಸಿರುವ ವರದಿಯಲ್ಲಿ ಜೀವಾಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಿರುಕುಳ, ಹಿಂಸೆ ನೀಡಿರುವುದನ್ನು ಉಲ್ಲೇಖಿಸಲಾಗಿದೆ.


