Librarian suicide
ನೆಲಮಂಗಲ: ಪಿಡಿಒ ಕಿರುಕುಳಕ್ಕೆ ನೊಂದ ಲೈಬ್ರೆರಿಯನ್ ಆತ್ಮಹತ್ಯೆ
ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳದಿಂದ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ ರಾಮಚಂದ್ರಯ್ಯ ಆತ್ಮಹತ್ಯೆ ಮಾಡಿಕೊಂಡವರು, ಇವರು 25 ವರ್ಷದಿಂದ ಅರೆಕಾಲಿಕ ಗ್ರಂಥಾಲಯ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಕಳಲುಘಟ್ಟ ಪಿಡಿಒ ಗೀತಾಮಣಿ ರಾಮಚಂದ್ರಯ್ಯನವರಿಗೆ ಮೂರು ತಿಂಗಳಿಂದ ಸಂಬಳ ನೀಡದೇ ಕಿರುಕುಳ ನೀಡುತ್ತಿದ್ದರು. ಬಯೋಮೆಟ್ರಿಕ್ ಹಾಜರಾತಿ ಹಾಕದೆ ಇಸಲ್ಲದ ಕಾರಣ ಹೇಳಿ ಕಿರುಕುಳ

