Menu

ಬಾಗಲಕೋಟೆಯಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ಬಾಲಕ ಸಾವು

ಸತತ ಮಳೆಯಿಂದಾಗಿ ಮನೆ ಗೋಡೆ ಕುಸಿದು ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಅಂಬೇಡ್ಕರ್ ವೃತ್ತದ ಬಳಿಯ ಮನೆ ಗೋಡೆ ಕುಸಿದ ಪರಿಣಾಮ ಮನೆಯಲ್ಲಿ ಮಲಗಿದ್ದ 11 ವರ್ಷದ ಬಾಲಕ ದರ್ಶನ್ ನಾಗಪ್ಪ ಲಾತೂರ ಮೃತಪಟ್ಟಿದ್ದಾನೆ. ಬಾಲಕನ ಸಹೋದರ ಶ್ರೀಶೈಲ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ಕುಟುಂಬ ಪತ್ರಾಸ್ ಮನೆಯಲ್ಲಿ ವಾಸವಿತ್ತು. ಶನಿವಾರ ಬೆಳಗಿನ ಜಾವ