Nepalis death
ಕುಂಭಮೇಳದಿಂದ ವಾಪಸಾಗುತ್ತಿದ್ದ ಐವರು ನೇಪಾಳಿಗಳು ಅಪಘಾತಕ್ಕೆ ಬಲಿ
ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದಾಗ ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಐವರು ನೇಪಾಳಿ ಪ್ರಜೆಗಳು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಒಂಬತ್ತು ಜನರಲ್ಲಿ ಐವರು ಸ್ಥಳದಲ್ಲೇ ಅಸು ನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಚನಾ ಠಾಕೂರ್, ಇಂದು ದೇವಿ, ಮಂತರ್ಣಿ ದೇವಿ, ಬಾಲ ಕೃಷ್ಣ ಝಾ ಮತ್ತು ಚಾಲಕ ಮೃತಪಟ್ಟವರು. ಗಾಯಗೊಂಡಿರುವ ಮನೋಹರ್ ಠಾಕೂರ್, ಸೃಷ್ಟಿ ಠಾಕೂರ್, ಕಮ್ನಿ ಝಾ ಮತ್ತು ದೇವತರಣ್ ದೇವಿ


