Menu

ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್: ಇಂದು ಶ್ರೀರಂಗಪಟ್ಟಣ ಬಂದ್‌

ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್ ಹೆಸರು ಎಂದು ನಮೂದಾಗಿದ್ದು, ಇದನ್ನು ಖಂಡಿಸಿ ರೈತರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಇಂದು (ಸೋಮವಾರ) ಶ್ರೀರಂಗಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸಿವೆ. ಕೆಲವು ತೆರೆದಿದ್ದ ಅಂಗಡಿಗಳನ್ನು ಪ್ರತಿಭಟನಾಕಾರರು ಮುಚ್ಚಿಸಿದ್ದಾರೆ. ಜಾಮೀಯಾ ಮಸೀದಿ ಸುತ್ತ ಬಿಗಿ ಪೊಲೀಸ್‌ ಬಂದೋಬ್ತ್‌ ಕಲ್ಪಿಸಲಾಗಿದೆ. ಟೈರ್ ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ವಾಹನ ಸಂಚಾರ ಕೂಡ ವಿರಳವಾಗಿದೆ. ಬಂದ್