Menu

ಬಿಹಾರ ಶೀತ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತಕ್ಕೆ ಎಂಟು ಮಂದಿ ಬಲಿ

ಬಿಹಾರದ ನಳಂದ ಶೀತ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ ಎಂಟು ಭಕ್ತರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರೆಲ್ಲರೂ ಮಹಿಳೆಯರು. ನಳಂದ ಬಿಹಾರ ಶರೀಫ್‌ನಿಂದ 5 ಕಿಲೋಮೀಟರ್ ದೂರದಲ್ಲಿರುವ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಚೈತ್ರ ಮಾಸದ ಕೊನೆಯ ಮಂಗಳವಾರ ಈ ದೇವಾಲಯದಲ್ಲಿ ಹೆಚ್ಚಿನ ಭಕ್ತರ ದಟ್ಟಣೆಯಿತ್ತು. ಹೀಗಾಗಿ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನಷೇ ಹೆಚ್ಚಿನ

ಕುಂಭಮೇಳ ಕಾಲ್ತುಳಿತಕ್ಕೆ ಬಲಿಯಾದ ನಾಲ್ವರ ಮೃತದೇಹ ಬೆಳಗಾವಿಗೆ

ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಂಟಾಗಿರುವ ಕಾಲ್ತುಳಿತಕ್ಕೆ ಐವತ್ತಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಬಲಿಯಾಗಿರುವವರಲ್ಲಿ ಬೆಳಗಾವಿಯ ನಾಲ್ವರ ಮೃತದೇಹ ಇಂದು (ಗುರುವಾರ) ಸಂಜೆ ಬೆಳಗಾವಿಗೆ ತಲುಪಲಿದೆ. ಇಂದೇ ಅಂತ್ಯ ಸಂಸ್ಕಾರ ಕೂಡ ನಡೆಯಲಿದೆ. ಮೃತದೇಹಗಳನ್ನು ಪ್ರಯಾಗ್‌ರಾಜ್‌ ನಿಂದ ದೆಹಲಿಗೆ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಹತ್ತು ಮಂದಿ ಬಲಿ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಹತ್ತು ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಧಾವಿಸುತ್ತಿದ್ದು, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನ