Thursday, September 17, 2026
Menu

ತಿರುಪತಿಯಲ್ಲಿ ಭಕ್ತರ ನೂಕುನುಗ್ಗಲಿಂದ ಕಾಲ್ತುಳಿತಕ್ಕೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆ

ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ  ವೈಕುಂಠ ಏಕಾದಶಿ ಪ್ರಯುಕ್ತ  ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್‌ ಪಡೆಯಲು ಭಕ್ತರು ನೂಕು ನುಗ್ಗಲು ಉಂಟು ಮಾಡಿದ್ದರಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ