Saturday, February 08, 2025
Menu

ಮಧ್ಯಮ ವರ್ಗದ ಜನರ ಬದುಕನ್ನು ಸರಳಗೊಳಿಸುವ ಬಜೆಟ್: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್ ಇದಾಗಿದೆ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ವಿರೋಧಿ ಬಜೆಟ್: ಸಿಎಂ ಸಿದ್ದರಾಮಯ್ಯ ಅಸಮಾಧಾನ

ದೂರದೃಷ್ಟಿ ರಹಿತ, ನಿರಾಶಾದಾಯಕ ಬಜೆಟ್ ಆಗಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್ ಆಗಿದೆ. ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಲ್ಲಿಸಿದ ಬೇಡಿಕೆ ಪಟ್ಟಿಯಲ್ಲಿ ಒಂದೂ ಈಡೇರಿಸಿಲ್ಲ.

ಕೇಂದ್ರ ಬಜೆಟ್ 2015: 12 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿ

ಮಧ್ಯಮ ವರ್ಗದ ಬಹು ನಿರೀಕ್ಷಿತ ಆದಾಯ ತೆರಿಗೆ ವಿನಾಯಿತಿಯನ್ನು ಗರಿಷ್ಠ 12 ಲಕ್ಷ ರೂ.ವರೆಗೆ ಘೋಷಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ದಾಖಲೆಯ 8ನೇ ಬಜೆಟ್ ನಲ್ಲಿ ಮಧ್ಯಮ ವರ್ಗದ ಬಹುಜನರ ಬೇಡಿಕೆಯ ಆದಾಯ ತೆರಿಗೆ ವಿನಾಯಿತಿಯನ್ನು