Tuesday, November 04, 2025
Menu

ಟೆಕ್ ಶೃಂಗಸಭೆ: ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರ ಆಗದಿರಲಿ ಎಂದ ಆರ್‌. ಅಶೋಕ

ಸಚಿವ @PriyankKharge ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ. ಈಗಲಾದರೂ ಅವರು ಮುಖ್ಯಮಂತ್ರಿ @siddaramaiah ಮತ್ತು ಡಿಸಿಎಂ @DKShivakumar ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ್ ಗೆ ಆಗಮಿಸುವ ಜಾಗತಿಕ ಪ್ರತಿನಿಧಿಗಳು ಪ್ರಯಾಣಿಸಬೇಕಾದ ಗುಂಡಿ ಬಿದ್ದ, ಹೊಂಡ ತುಂಬಿದ, ಕಸದಿಂದ ತುಂಬಿ ತುಳುಕುವ ರಸ್ತೆಗಳನ್ನು ಸರಿಪಡಿಸಲು ಮನವಿ ಮಾಡುವರೇ? ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಪ್ರಶ್ನಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು,   ಟೆಕ್ ಶೃಂಗಸಭೆ (Bengaluru Tech Summit) ನಮ್ಮ ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರವಾಗುವುದಿಲ್ಲ ಎಂದು @INCKarnataka ಸರ್ಕಾರ ಗ್ಯಾರೆಂಟಿ ನೀಡುತ್ತದೆಯೇ? ಎಂದು ಕೇಳಿದ್ದಾರೆ.

 

ಕಳೆದ 2.5 ವರ್ಷಗಳಿಂದ, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಮೂಲಸೌಕರ್ಯವನ್ನು ಹಾಳು ಮಾಡಿದೆ, ಟ್ರಾಫಿಕ್ ಸಮಸ್ಯೆ ಉಲ್ಬಣಗೊಳಿಸಿದೆ, ಹೂಡಿಕೆದಾರರನ್ನು ಮತ್ತು ಸ್ಟಾರ್ಟ್‌ಅಪ್‌ಗಳನ್ನು ಹೆದರಿಸಿ, ಬೆದರಿಸಿ, ಅವಮಾನ ಮಾಡಿ ಬೆಂಗಳೂರಿನ ವರ್ಚಸ್ಸಿಗೆ, ಜಾಗತಿಕ ಬ್ರ್ಯಾಂಡ್‌ಗೆ ಧಕ್ಕೆ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು, ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಭಾಗಿಯಾಗಲು ಪ್ರಪಂಚದ ತಂತ್ರಜ್ಞಾನ ಲೋಕದ ದಿಗ್ಗಜರು ಬೆಂಗಳೂರಿಗೆ ಬರುವ ಮುನ್ನ ಇಲ್ಲಿನ ರಸ್ತೆಗಳನ್ನು ಸರಿಪಡಿಸಿ, ನಮ್ಮ ನಗರವನ್ನು ಮತ್ತೊಂದು ಸುತ್ತಿನ ಅವಮಾನದಿಂದ ಉಳಿಸಲಿ ಎನ್ನುವುದೇ ಜನರ ನಿರೀಕ್ಷೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *