Wednesday, August 06, 2025
Menu

ಸಚಿವ ಕೆಜೆ ಜಾರ್ಜ್ ಗೆ ತಾತ್ಕಾಲಿಕ ರಿಲೀಫ್: ಸ್ಮಾರ್ಟ್ ಮೀಟರ್ ಅಕ್ರಮ ಪ್ರಕರಣದ ವಿಚಾರಣೆಗೆ ತಡೆ

kj george

ಬೆಂಗಳೂರು: ಸ್ಮಾರ್ಟ್‌ ಮೀಟರ್ ಗುತ್ತಿಗೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧದ ಖಾಸಗಿ ದೂರಿನ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಖಾಸಗಿ ದೂರು ರದ್ದು ಕೋರಿ ಕೆ.ಜೆ.ಜಾರ್ಜ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ನಮ್ಮ ಕಕ್ಷಿದಾರರು ಜನಪ್ರತಿನಿಧಿಯಾಗಿದ್ದಾರೆ. ಅವರ ವಿರುದ್ಧದ ವಿಚಾರಣೆಗೆ ಭ್ರಷ್ಟಾಚಾರ ತಡೆ ಕಾಯಿದೆ ಸೆಕ್ಷನ್‌ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದರೆ, ಅರ್ಜಿದಾರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ವಿಚಾರಣೆಗೆ ಪರಿಗಣಿಸಲಾಗಿದೆ. ಇದು ಕಾನೂನುಬಾಹಿರ” ಎಂದು ಪೀಠಕ್ಕೆ ವಿವರಿಸಿದರು.

Related Posts

Leave a Reply

Your email address will not be published. Required fields are marked *