ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ʻಕಾಂತಾರ ಚಾಪ್ಟರ್-1ʼ ಚಿತ್ರದ ಸಹ ಕಲಾವಿದ ಬಿಜು ವಿಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಬ್ಯಾಕ್ ವಾಟರ್ನಲ್ಲಿ ದೈವದ ಉತ್ಸವ ಚಿತ್ರೀಕರಣಕ್ಕೂ ಮೊದಲೇ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಬಿಜು ವಿಕೆ ಅಸು ನೀಗಿದ್ದಾರೆ.
ದೈವದ ಉತ್ಸವ ಸನ್ನಿವೇಶ ಚಿತ್ರೀಕರಣಕ್ಕಾಗಿ ಬ್ಯಾಕ್ ವಾಟರ್ನಲ್ಲಿ ಅದ್ಧೂರಿ ಸೆಟ್ ಹಾಕಲಾಗಿತ್ತು. ಇದೇ ಚಿತ್ರೀಕರಣದಲ್ಲಿ ಬಿಜು ವಿಕೆ ಭಾಗಿಯಾಗಬೇಕಿತ್ತು, ವಿಜು ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಯಡೂರಿನ ಹೋಂ ಸ್ಟೇಲ್ಲಿ ತಂಗಿದ್ದರು. ರಾತ್ರಿ ಏಕಾಏಕಿ ವಿಜು ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತೀರ್ಥಹಳ್ಳಿಯ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಬಿಜು ಮೃತದೇಹ ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿರಿಸಲಾಗಿದೆ. ಕೇರಳದಿಂದ ಬಿಜು ಕುಟುಂಬಸ್ಥರ ಆಗಮನಕ್ಕೆ ಪೊಲೀಸರು ಕಾಯುತ್ತಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂತಾರ ಚಾಪ್ಟರ್ 1ʼ ಸಹ ಕಲಾವಿದ ಕಪಿಲ್ ಸೌಪರ್ಣಿಕಾ ನದಿಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಇದೇ ಚಿತ್ರದ ಸಹಕಲಾವಿದ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಕೆಲವು ದಿನಗಳ ಹಿಂದೆ ಅಸು ನೀಗಿದ್ದಾರೆ. ಈಗ ಬಿಜು ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ.