ಶ್ರೀಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ, ಬಾಂಗ್ಲಾದಿಂದ ಬಂದಿದ್ದ ಅಕ್ರಮ ವಲಸಿಗರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು.
ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ ಬಂದ ಮೂವರು ಬೆಂಗಳೂರಿನ ದೇವನಹಳ್ಳಿ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ವೊಂದರಲ್ಲಿ ವಾಸವಿದ್ದರು. ಶ್ರೀಲಂಕಾದ ಜಾಫ್ನಾದಿಂದ ಬೋಟ್ ಮೂಲಕ ತಮಿಳುನಾಡಿಗೆ ಬಂದಿಳಿದಿದ್ದ ಅವರು ರಾಮೇಶ್ವರಂಗೆ ಹೋಗಿದ್ದರು. ಸ್ಥಳೀಯ ವ್ಯಕ್ತಿಯೊಬ್ಬನ ಸಹಾಯ ಪಡೆದು ಬೆಂಗಳೂರಿಗೆ ಬಂದು ಅಕ್ರಮವಾಗಿ ದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು.
ವಿದೇಶಿ ಪ್ರಜೆಗಳು ನೆಲೆಸಿದ್ದ ಬಗ್ಗೆ ಸಿಸಿಬಿಗೆ ಮಾಹಿತಿ ಲಭ್ಯವಾಗಿತ್ತು. ಬೆಂಗಳೂರಿನ ಸಿಸಿಬಿ ಠಾಣೆಯಲ್ಲಿ ಫಾರಿನ್ ಆ್ಯಕ್ಟ್ ಅಡಿ ಕೇಸ್ ದಾಖಲು ಮಾಡಿಕೊಂಡಿದ್ದರು. ಕಳೆದ ಒಂದು ವರ್ಷದಿಂದ ಪಾಸ್ಪೋರ್ಟ್ ಮತ್ತು ವೀಸಾವಿಲ್ಲದೆ ಇಲ್ಲಿ ಉಳಿದಿದ್ದರು ಎಂಬುದು ಸಿಸಿಬಿ ಕಾರ್ಯಾಚರಣೆ ವೇಳೆ ಪತ್ತೆಯಾಗಿತ್ತು. ಈ ಅಕ್ರಮ ವಲಸಿಗರು ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಡೀಲರ್ಸ್ ಎಂಬ ಮಾಹಿತಿ ಲಭ್ಯವಾದೆ. ಒಬ್ಬಾತನ ವಿರುದ್ಧ ಎನ್ಸಿಬಿ ಕೇಸ್ ದಾಖಲಾಗಿದೆ. ಶ್ರೀಲಂಕಾದ ರಾಯಭಾರಿ ಕಚೇರಿಗೆ ಸಿಸಿಬಿ ಈ ಬಗ್ಗೆ ಮಾಹಿತಿ ರವಾನಿಸಿದೆ.
ಈ ಹಿಂದೆ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶದ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್ಪೋರ್ಟ್ ಪಡೆದಿದ್ದರು. ಇವರ ಮನೆಗಳ ಸಿಸಿಬಿ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದರು. ಹಿಂದೂ ಹೆಸರನ್ನಿಟ್ಟುಕೊಂಡಿದ್ದ ಪಾಕಿಸ್ತಾನಿ ಪ್ರಜೆಗಳು ದಾವಣಗೆರೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಾಸವಿದ್ದರು. ಪಾಕ್ ಮಹಿಳೆ ದಾವಣಗೆರೆಯ ಮುಸ್ಲಿಮ್ ವ್ಯಕ್ತಿಯನ್ನು ಮದುವೆಯಾಗಿದ್ದಳು. ಆಕೆಯೊಂದಿಗೆ ಉಳಿದ ಪಾಕ್ ಪ್ರಜೆಗಳನ್ನು ಕೂಡ ಪೊಲೀಸರು ಬಂಧಿಸಿದ್ದರು.


