ಬೆಂಗಳೂರು: ಪ್ರೀತಿಸಿದ ಯುವತಿಯಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ರಾಜಘಟ್ಟ ಗ್ರಾಮದ ಕೆರೆ ಬಳಿ ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್, ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್, ಆಕೆಗೆ ಬೇರೊಬ್ಬನ ಜೊತೆ ಸಂಬಂಧವಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೂಡಿಸುವಂತೆ ಹೇಳಿದ್ದಾರೆ.
ಯುವತಿ ಮತ್ತು ಆಕೆ ಕುಟುಂಬಸ್ಥರು ನಾಪತ್ತೆ
ಮಾತ್ರೆ ಸೇವಿಸಿದ್ದ ಮಂಜುನಾಥ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೊಬೈಲ್ ಪಾಸ್ವರ್ಡ್ ಸಮೇತ ಯುವಕ ಸೆಲ್ಫಿ ವಿಡಿಯೋ ಮಾಡಿದ್ದಾನೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆ ಕುಟುಂಬಸ್ಥರು ನಾಪತ್ತೆ ಆಗಿದ್ದಾರೆ.